ಎಕೋಣಾಜೆ:ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವಾರ್ಷಿಕ ಕೌನ್ಸಿಲ್
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿರವರ ಅಧ್ಯಕ್ಷತಯಲ್ಲಿ ಅಲ್ ಮದೀನಾ ಹಾಲ್ ತಿಬ್ಲೆಪದವುವಿನಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಜಿಲ್ಲಾ ಸದಸ್ಯ ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ ದುಆ: ನೆರವೇರಿಸಿದರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ಸಂಘಟನಾ ತರಗತಿಯನ್ನು ನಡೆಸಿದರು.
ಚುನಾವಣಾ ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಎಸ್ಸೆಸ್ಸೆಫ್ ಜಿಲ್ಲಾ ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ ಹಾಗೂ ಜಿಲ್ಲಾ ಸದಸ್ಯ ರಶೀದ್ ಹಾಜಿ ವಗ್ಗ ಪ್ರಾಸ್ತಾವಿಕವಾಗಿ ಮಾತನಾಡಿದರು.
ವರದಿ ಹಾಗೂ ಲೆಕ್ಕ ಪತ್ರ ಮಂಡನೆಯ ನಂತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸಯ್ಯದ್ ಖುಬೈಬ್ ತಂಙಳ್ ಉಳ್ಳಾಲ,,ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ,ಕೋಶಾಧಿಕಾರಿ ಜಿ.ಎ.ಇಬ್ರಾಹಿಂ ಅಜ್ಜಿನಡ್ಕ,,ಕ್ಯಾಂಪಸ್ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್ ಉಳ್ಳಾಲ,ಉಪಾಧ್ಯಕ್ಷರುಗಳಾಗಿ ಜುನೈದ್ ಸಖಾಫಿ ಬೆಳ್ಮ,ಇರ್ಫಾನ್ ನೂರಾನಿ ಕಿನ್ಯ,ಇಸ್ಮಾಯಿಲ್ ತಲಪಾಡಿ, ಕಾರ್ಯದರ್ಶಿಗಳಾಗಿ ಶಿಹಾಬುದ್ದೀನ್ ಕೆ.ಸಿ ರೋಡ್,ನಾಸಿರ್ ಅಜ್ಜಿನಡ್ಕ,ಜಾಫರ್ ಅಳೇಕಲ ಹಾಗೂ ಇನ್ನಿತರ 13 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಾಯಕರಾದ ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ,ಡಿವಿಷನ್ ನಾಯಕರಾದ ಫಾರೂಕ್ ಸಖಾಫಿ ಮದನಿ ನಗರ,ಆಸಿಫ್ ಸಖಾಫಿ ಮುಡಿಪು ಮಜೀದ್ ಫರೀದ್ ನಗರ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ಸ್ವಾಗತಿಸಿದರು,ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ವಂದಿಸಿದರು.