ಕಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ವತಿಯಿಂದ ರಾಷ್ಟ್ರೀಯ ಮಟ್ಟದ ಆರು ಝೋನ್ ಗಳನ್ನು ( ಮಸ್ಕತ್, ಸೊಹಾರ್, ಸೀಬ್, ನಿಝ್ವ, ಬುರೈಮಿ, ಸಲಾಲ)
ಒಳಗೊಂಡ ಪ್ರತಿಭೋತ್ಸವವು ಮತ್ತು ಕೆಸಿಎಫ್ ಅಂತರಾಷ್ಟ್ರೀಯ ಸಮ್ಮಿಟ್ ಜಾಬಿರ್ ಫಾರ್ಮ್ ಹೌಸ್ ಬರ್ಕದಲ್ಲಿ ಇನ್ ಶಾ ಅಲ್ಲಾ ಜನವರಿ 11 ರಂದು ನಡೆಯಲಿದೆ. ಕೆಸಿಎಫ್ ಒಮಾನ್ ರಾಷ್ಟ್ರೀಯ ಅಧ್ಯಕ್ಷ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ಇವರ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದ ಉದ್ಘಾಟನೆ ಯನ್ನು ದಕ್ಷಿಣ ಕನ್ನಡ ಉಡುಪಿ ಸಂಯುಕ್ತ ಖಾಝಿ ಶೈಖುನಾ ತಾಜುಲ್ ಫುಖಹಾ಼ಹ಼್
ಅಲ್ ಹಾಜ್ ಬೇಕಲ ಇಬ್ರಾಹಿಮ್ ಮುಸ್ಲಿಯಾರ್ ಇವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ತಾಜುಲ್ ಫುಖಹಾಹ್ ಬೇಕಲ ಉಸ್ತಾದ್ ಮತ್ತು ಡಾಕ್ಟರೇಟ್ ಪದವಿ ಪಡೆದ ಝೈನಿ ಉಸ್ತಾದ್ ರವರಿಗೆ ಸನ್ಮಾನ ಹಾಗೂ ಅಸ್ಸುಫ ತರಗತಿಯ ಎರಡನೇ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಸರ್ಟಿಫಿಕೇಟ್ ವಿತರಣೆ ಕಾರ್ಯಕ್ರಮವು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹುಮಾನ್ಯ ಹಂಝ ಸಖಾಫಿ ಉಸ್ತಾದ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಈಶ್ವರಮಂಗಿಲ, ಕೊಶಾಧಿಕಾರಿ ಹಾಜಿ ಶೈಖ್ ಬಾವ ಮಂಗಳೂರು, ಸಂಘಟನಾ ಅಧ್ಯಕ್ಷ ಡಾ. ಅಬ್ದುಲ್ ರಶೀದ್ ಝೈನಿ ಖಾಮಿಲ್ ಸಖಾಫಿ ಉಸ್ತಾದ್, ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ,
ಎಜುಕೇಶನ್ ವಿಭಾಗದ ಅಧ್ಯಕ್ಷ ಡಿ.ಪಿ.ಯೂಸುಫ್ ಸಖಾಫಿ ಬೈತಾರ್, ಎಜುಕೇಶನ್ ವಿಭಾಗದ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ, ಇಹ್ಸಾನ್ ವಿಭಾಗದ ಕಾರ್ಯದರ್ಶಿ ರಹೀಮ್ ಸಅದಿ, ಪ್ರಕಾಶನ ವಿಭಾಗದ ಕಾರ್ಯದರ್ಶಿ ಪಿ.ಪಿ. ನಝೀರ್ ಹಾಜಿ ಕಾಶಿಪಟ್ನ, ಆಡಳಿತ ವಿಭಾಗದ ಅಧ್ಯಕ್ಷ ಉಮರ್ ಸಖಾಫಿ ಮಿತ್ತೂರು, ಆಡಳಿತ ವಿಭಾಗ ಕಾರ್ಯದರ್ಶಿ ಹುಸೈನ್ ಮುಸ್ಲಿಯಾರ್ ಎಮ್ಮೆಮ್ಮಾಡ್, ಸಾಂತ್ವನ ವಿಭಾಗದ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ, ಕೆಸಿಎಫ್ ಅಂತರರಾಷ್ಟ್ರೀಯ ಸಮಿತಿ ಸದಸ್ಯರಾದ ಅಝೀಝ್ ಮುಸ್ಲಿಯಾರ್ ಮಲೇಷ್ಯಾ, ಉಸ್ಮಾನ್ ಹಾಜಿ ದುಬೈ, ಅಲಿ ಮುಸ್ಲಿಯಾರ್ ಬಹರೈನ್ ಇವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಫ್ಯಾಮಿಲಿ ಮೀಟ್ ಮತ್ತು ಮಹಿಳೆಯರ ಮತ್ತು ಮಕ್ಕಳ ವಿಭಾಗದ ಸ್ಪರ್ಧಾತ್ಮಕ ಕಾರ್ಯಕ್ರಮ ನಡೆಯಲಿದೆ .















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ