janadhvani

Kannada Online News Paper

ಮುಡಿಪು ಪ್ರತಿಭಟನೆ – ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಕರೆ

ಕೀಳುಮಟ್ಟದ ಪದ ಬಳಸಿ ಪ್ರವಾದಿ (ಸ) ರನ್ನು ನಿಂದಿಸಿದ ಸುವರ್ಣ ಚ್ಯಾನಲಿನ ಆ್ಯಂಕರ್ ಅಜಿತ್ ಹನುಮಕ್ಕನವರ್ ವಿರುದ್ಧ ಮುಡಿಪು ಸುನ್ನಿ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆಯು ಜನವರಿ 11 ಶುಕ್ರವಾರ ಸಂಜೆ 4:00 ಗಂಟೆಗೆ ಮುಡಿಪು ಜಂಕ್ಷನ್ ನಲ್ಲಿ ನಡೆಯಲಿರುವುದು.ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.*

ಖಾಝಿ ಸಯ್ಯಿದ್ ಕೂರತ್ ತಂಙಳ್, ಶರಪುಲ್ ಉಲಮಾ ಅಬ್ಬಾಸ್ ಉಸ್ತಾದ್, ಆದೂರು ಅಶ್ರಫ್ ತಂಙಳ್, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಂತಾದ ನಾಯಕರು ಭಾಗವಹಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೆಕ್ಟರ್- ಶಾಖಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com