ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂಬ ಮಾಧ್ಯಮಗಳ ವರದಿಯನ್ನು ಅಲ್ಲಗಳೆದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅದು ಕಪೋಲಕಲ್ಪಿತ. ಸಮ್ಮಿಶ್ರ ಸರ್ಕಾರಯಾವುದೇ ಅಡೆತಡೆ ಇಲ್ಲದೆ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಚರ್ಚಿತವಾದ ವಿಚಾರಗಳೇ ಬೇರೆ. ಆದರೆ ಮಾಧ್ಯಮಗಳಲ್ಲಿ ವರದಿಯಾಗಿದ್ದೇ ಬೇರೆ. ಸಮ್ಮಿಶ್ರ ಸರ್ಕಾರದಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದೆಲ್ಲ ಹೇಳಿರುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಸ್ಪಷ್ಟಪಡಿಸಿದರು.
ಯಾವುದೇ ಅಡೆತಡೆ ಇಲ್ಲದೆ ಮೈತ್ರಿ ಸರ್ಕಾರ ಸುಗಮವಾಗಿ ನಡೆಯಲಿದ್ದು, ಸರ್ಕಾರದ ಬಗ್ಗೆ ಅಪನಂಬಿಕೆ ಬೇಡ ಎಂದರು. ಕೇಂದ್ರದ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್ ಜೆಡಿಎಸ್ನಲ್ಲಿದ್ದಾಗ ಬಿಜೆಪಿಯವರ ವಿರುದ್ಧ ಮಾತನಾಡುತ್ತಿದ್ದರು. ಈಗ ಮತ್ತೆ ಬಿಜೆಪಿಯಲ್ಲಿರುವರು. ಹಾಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ.ಇದಕ್ಕೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಗಳಿಗೆ ಹೆಚ್ಚಿನ ಮಹತ್ವ ಇರುವುದಿಲ್ಲ. ಇದು ನಮ್ಮ ಅಭಿಪ್ರಾಯ ಎಂದ ಅವರು,ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕುರಿತಂತೆ ಪ್ರತಿಕ್ರಿಯೆ ನೀಡಿ, ಜನರ ಸಮಸ್ಯೆಯನ್ನು ನಿವಾರಣೆ ಮಾಡುವುದು ಮುಖ್ಯ. ಅದಕ್ಕಾಗಿ ಆದ್ಯತೆ ನೀಡಿದ್ದೇವೆ. ಇದರಲ್ಲಿ ಯಾವುದೇ ಒತ್ತಡವಿಲ್ಲ ಎಂದು ಹೇಳಿದರು.
ನೀರಿಗೆ ಕೀಟನಾಶಕ ಬೆರಕೆ ಪ್ರಕರಣ ಕುರಿತಂತೆ ಈಗಾಗಲೇ ಜಿಲ್ಲಾಧಿಕಾರ,ಎಸ್ಪಿ ಹಾಗೂ ಸಿಇಒ ಅವರೊಂದಿಗೆ ಚರ್ಚೆ ನಡೆಸಿದ್ದು, ಸ್ಥಳಕ್ಕೆ ಭೇಟಿ ನೀಡಿ ವಾಸ್ತವಿಕ ವರದಿ ನೀಡಲು ಸೂಚಿಸಲಾಗಿದೆ ಎಂದು ಉತ್ತರಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ