ಅಜ್ಮಾನ್: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ರಾಷ್ಟ್ರೀಯ ಸಮಿತಿ ಅಜ್ಮಾನ್ ನಲ್ಲಿ ಹಮ್ಮಿಕೊಂಡ ಪ್ರತಿಭೋತ್ಸವ-2019 ಕಾರ್ಯಕ್ರಮದಲ್ಲಿ ಅಬ್ದುಲ್ ಖಾದರ್ ಸಾಲೆತೂರುರವರ ಪುತ್ರಿ ಆಯಿಷಾ ನೂರೈನ್2 ಪ್ರಥಮ ಸ್ಥಾನ ಗಳಿಸಿ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ.ಸಬ್ ಜೂನಿಯರ್ ವಿಭಾಗದ ಹಾಡು ಮತ್ತು ಖಿರಾಅತಿನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಯು.ಎ.ಇ ಯ ಆರು ಎಮಿರೇಟ್ಸ್ ಗಳ 250 ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತನ್ನ ಪ್ರತಿಭೆಗಳನ್ನು ತೋರ್ಪಡಿಸಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಕೆ.ಸಿ.ಎಫ್ ಝೋನ್ ಮಟ್ಟದ ಪ್ರತಿಭೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದು ಅರ್ಹವಾಗಿಯೇ ರಾಷ್ಟ್ರೀಯ ಪ್ರತಿಭೋತ್ಸವಕ್ಕೆ ಆಯ್ಕೆಗೊಂಡ ಆಯಿಷಾ ರಾಷ್ಟ್ರೀಯ ಪ್ರತಿಭೋತ್ಸವದಲ್ಲೂ ತನ್ನ ಅದ್ಭುತವಾದ ಪ್ರತಿಭೆಗಳ ಮೂಲಕ ಮಿಂಚಿ ಎರಡು ಪ್ರಥಮ ಬಹುಮಾನಗಳನ್ನು ತನ್ನದಾಗಿಸಿಕೊಂಡಿದ್ದಾರೆ.
ಕೆ.ಸಿ.ಎಫ್ ದುಬೈ ನಾರ್ತ್ ಝೋನ್ ನಿಂದ ಆಯ್ಕೆಯಾಗಿ ಬಂದಿರುವ ಆಯಿಷಾ ನೂರೈನ್ ಅಧ್ಭುತ ಪ್ರತಿಭೆ ಮತ್ತು ಕಲಿಕೆಯಲ್ಲೂ ಅಧ್ಯಾಪಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ದುಬೈ ಯಲ್ಲಿ ಉದ್ಯಮಿಯಾಗಿರುವ ಅಬ್ದುಲ್ ಖಾದರ್ ಸಾಲೆತ್ತೂರು ಕೆ.ಸಿ.ಎಫ್ ಸಕ್ರೀಯ ಕಾರ್ಯಕರ್ತರು ಮತ್ತು ಪ್ರತಿಭೋತ್ಸವ ಸಮಿತಿಯ ಚೇರ್ಮನ್ ಆಗಿಯೂ ಆಯ್ಕೆಯಾಗಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು