janadhvani

Kannada Online News Paper

ಎಸ್ಸೆಸ್ಸೆಫ್ ಮುಡಿಪು ಡಿವಿಶನ್ : ಪಬ್ಲಿಸಿಟಿ ಕನ್ವೆನ್ಶನ್

ಮುಡಿಪು : ಜನವರಿ 27 ರಂದು ಬೆಂಗಳೂರಿನ ಖುದ್ದೂಸ್ ಈದ್ಗಾ ಮೈದಾನದಲ್ಲಿ ನಡೆಯುವ ಕರ್ನಾಟಕ ಮುಸ್ಲಿಂ ಜಮಾಅತ್ ಘೋಷಣೆ ಮತ್ತು 26 ಹಾಗೂ 27ರಂದು ನಡೆಯುವ ಉಂದುಲುಸ್ ಎಸ್ಸೆಸ್ಸೆಫ್ ರಾಜ್ಯ ಪ್ರತಿನಿಧಿ ಸಮಾವೇಶದ ಪ್ರಚಾರಾರ್ಥ ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ “ಡಿವಿಶನ್ ಪಬ್ಲಿಸಿಟಿ ಕನ್ವೆನ್ಶನ್” ಮುಡಿಪುವಿನ ಮಜ್ಲಿಸ್ ಎಜ್ಯು ಪಾರ್ಕ್ ನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳರವರು ಅಧ್ಯಕ್ಷತೆ ವಹಿಸಿದ್ದರು. ಡಿವಿಶನ್ ಉಪಾಧ್ಯಕ್ಷ ಸಿದ್ದೀಕ್ ಸಖಾಫಿ ಕಾಯಾರ್ ಸಭೆಯನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಜಮಾಲ್ ಸಖಾಫಿ ಮುದುಂಗಾರ್ ಕಟ್ಟೆ, ಇಬ್ರಾಹಿಂ ಅಹ್ಸನಿ ಮಂಜನಾಡಿ ಸಂದೇಶ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ನಾಯಕರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ಸಿರಾಜುದ್ದೀನ್ ಸಖಾಫಿ ಕನ್ಯಾನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಜಮಾಲ್ ಸಖಾಫಿ ರವರನ್ನು ಸನ್ಮಾನಿಸಲಾಯಿತು.

ಮುಡಿಪು ಡಿವಿಶನ್ ಕೋಶಾಧಿಕಾರಿ ಶರೀಫ್ ಮುಡಿಪು, ಕ್ಯಾಂಪಸ್ ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳ, ಜೊತೆ ಕಾರ್ಯದರ್ಶಿ ಮೊಯ್ದಿನ್ ಮೋರ್ಲ,ಉಳ್ಳಾಲ ಡಿವಿಶನ್ ಮಾಜಿ ನಾಯಕರಾದ ಶರೀಫ್ ಸಅದಿ ಅರಫಾ, ಅಝೀಝ್ ಎಚ್‌ಕಲ್, ಹಾಗೂ ಮುಡಿಪು ಡಿವಿಶನ್ ಡಿವಿಶನ್ ನಾಯಕರು, ಸೆಕ್ಟರ್- ಶಾಖಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಡಿವಿಶನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ನೌಫಲ್ ಫರೀದ್‌ನಗರ ಧನ್ಯವಾದವಿತ್ತರು.

error: Content is protected !! Not allowed copy content from janadhvani.com