ಕುವೈತ್ ಸಿಟಿ: ದೇಶದ ಸರಕಾರೀ, ಸಾರ್ವಜನಿಕ ವಲಯದಲ್ಲಿ ಜಾರಿಗೆ ತರಲಾಗುತ್ತಿರುವ ಸ್ವದೇಶೀಕರಣದ ನಂತರ ಖಾಸಗಿ ವಲಯದಲ್ಲಿಯೂ ಸ್ವದೇಶೀಕರಣಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಬಗ್ಗೆ ತಜ್ಞರ ತಂಡದ ವರದಿಯನ್ನು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಇಲಾಖೆಯ ಸಚಿವ ಮರಿಯಮ್ ಅಲ್ ಅಖೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ಪ್ರಸ್ತಾವನೆಯನ್ನು ಸಲ್ಲಿಸಿದರು.
ಹಂತ ಹಂತವಾಗಿ ಸಾರ್ವಜನಿಕ ವಲಯದಲ್ಲಿ ಸರ್ಕಾರ ಸ್ವದೇಶೀಕರಣವನ್ನು ಜಾರಿಗೆ ತರುತ್ತಿದ್ದು, ಅದನ್ನು ತ್ವರಿತಗೊಳಿಸಿ ಮುಂದಿನ ಐದು ವರ್ಷಗಳಲ್ಲಿ ಪೂರ್ಣಗೊಳಿಸುವಂತೆ ಸಚಿವರು ಆದೇಶ ನೀಡಿದ್ದಾರೆ.
ಅಲ್ಲದೆ ಖಾಸಗಿ ವಲಯದಲ್ಲಿ ವಿದೇಶಿಯರ ವಶದಲ್ಲಿರುವ ಉದ್ಯೋಗಾವಕಾಶವನ್ನು ಸ್ಥಳೀಯರಿಗಾಗಿ ಕಾದಿರಿಸುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗಿದೆ. ಇಡೀ ದೇಶದ ಖಾಸಗಿ ವಲಯದಲ್ಲಿನ ಆಡಳಿತ, ನಿರ್ವಹಣೆ ಹುದ್ದೆಗಳನ್ನು ಸಂಪೂರ್ಣವಾಗಿ ದೇಶೀಯ ಪ್ರಜೆಗಳಿಗೆ ಖಾತರಿಪಡಿಸುವುದು ಸರ್ಕಾರದ ಗುರಿಯಾಗಿದೆ.
ಸರ್ಕಾರ ಪ್ರಸ್ತುತ ಖಾಸಗಿ ವಲಯದಲ್ಲಿನ ಸ್ವದೇಶೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಬಹಳಷ್ಟು ವಿದೇಶಿಯರು ಪರಿಣಾಮ ಎದುರಿಸಬೇಕಾದಂತಹ ಹಲವಾರು ಯೋಜನೆಗಳ ಬಗ್ಗೆ ಯೋಚಿಸುತ್ತಿದೆ.
ದೇಶವು ಎದುರಿಸುತ್ತಿರುವ ಗಂಭೀರ ವಿಷಯವಾದ ಜನಸಂಖ್ಯಾ ಅಸಮತೋಲನಕ್ಕೆ ಪರಿಹಾರ, ವೈಯಕ್ತಿಕ ಸ್ಪೋನ್ಸರ್ಶಿಪ್ ಸಂಪ್ರದಾಯ, ಮಾನವ ಕಳ್ಳಸಾಗಣೆ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿದೆ. ಈ ಸಮಸ್ಯೆಗಳನ್ನು ಗಂಭೀರವಾಗಿ ಚರ್ಚಿಸುವುದು ಮತ್ತು ತಕ್ಷಣದ ಪರಿಹಾರವನ್ನು ಪರಿಶೀಲಿಸುವುದಕ್ಕಾಗಿ ಸಚಿವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಆದರೆ ಸರ್ಕಾರಿ, ಖಾಸಗಿ ವಲಯದಲ್ಲಿ ದೇಶೀಕರಣ ಶಕ್ತವಾಗುವುದರೊಂದಿಗೆ ಆ ವಲಯದಲ್ಲಿ ಕಾರ್ಯವಿರ್ವಹಿಸುವ ವಿದೇಶಿಯರು ತಮ್ಮ ಕೆಲಸ ಕಳೆದುಕೊಳ್ಳುವ ಭೀತಿ ಮುಂದುವರಿಯಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು